top of page

ಡಿಸೆಂಬರ್ 22 ರಂದು ಹಸೆಮಣೆ ಏರಲಿದ್ದಾರೆ ಪಿ.ವಿ ಸಿಂಧು: ಬ್ಯಾಡ್ಮಿಂಟನ್ ತಾರೆ ಕೈ ಹಿಡಿಯುವ ಹುಡುಗ ಯಾರು?

  • Writer: sumanth newwaves
    sumanth newwaves
  • Dec 5, 2024
  • 1 min read

ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವಿವಾಹವಾಗಲಿದ್ದಾರೆ.

ree









ಹೈದರಾಬಾದ್: ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ ಡಿ.22 ರಂದು ಉದಯಪುರದಲ್ಲಿ ಹಸಮಣೆ ಏರಲಿದ್ದಾರೆ.

ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವಿವಾಹವಾಗಲಿದ್ದಾರೆ. ಈ ಕುರಿತು ಸಿಂಧು ತಂದೆ ಪಿವಿ ರಮಣ ಮಾಹಿತಿ ನೀಡಿದ್ದು, ಡಿ.20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದೆ. ಡಿ.22 ರಂದು ಉದಯಪುರದಲ್ಲಿ ಮದುವೆ ನಡೆಯಲಿದೆ. ಎರಡು ಕುಟುಂಬಗಳ ಪರಸ್ಪರ ಒಪ್ಪಿಗೆಯಿಂದ ಮದುವೆ ನಡೆಯುತ್ತಿದ್ದು, ಒಟ್ಟು ಐದು ದಿನಗಳ ಕಾಲ ಮದುವೆ ಸಂಭ್ರಮ ನಡೆಯಲಿದೆ. ಇನ್ನೂ ಡಿ.24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಿಂಧು ಒಂದು ಚಿನ್ನದ ಪದಕ ಸೇರಿದಂತೆ ಒಟ್ಟು ಐದು ವಿಶ್ವ ಚಾಂಪಿಯನ್‌ಶಿಪ್ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪಿ.ವಿ ಸಿಂಧು ಜನವರಿಯಲ್ಲಿ ಮತ್ತೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಗೆ ಮರಳಲಿದ್ದು, ಮುಂಬರುವ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಮದುವೆ ದಿನಾಂಕವನ್ನು ನಿಗದಿಪಡಿಸಲಾಗಿದೆ. ಪಿವಿ ಸಿಂಧು ಹಾಗೂ ವೆಂಕಟ ದತ್ತ ಅವರ ಕುಟುಂಬದವರು ಪರಸ್ಪರ ಪರಿಚಿತರು. ಹೀಗಿದ್ದೂ ಕಳೆದ ಒಂದು ತಿಂಗಳ ಹಿಂದಷ್ಟೇ ಮದುವೆ ವಿಚಾರ ಅಂತಿಮವಾಗಿದೆ ಎಂದು ವರದಿಯಾಗಿದೆ. ಶಿಕ್ಷಣ ಪೂರ್ಣವಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕತ್ವ ಹೊಂದಿರುವ ಜೆಎಸ್‌ಡಬ್ಲ್ಯೂನಲ್ಲಿ ಇಂಟರ್ನ್ ಮತ್ತು ಆಂತರಿಕ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ಚುರುಮುರಿ: ಸಂಬಳದ ಜೋಕು!

ಕ್ರೀಡೆ

IPL 2025 ಕಳಪೆ ಸಾಧನೆ: ತವರಿನ ಅಂಗಳ ಚಿನ್ನಸ್ವಾಮಿಯಲ್ಲಿ ಆರ್‌ಸಿಬಿಗೆ 45ನೇ ಸೋಲು!

 

ಸಿನಿಮಾ ರಂಗಕ್ಕೆ ಕಾಲಿಟ್ಟ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ!

 

IPL 2025:ಪಾಟೀದಾರ್ ನಾಯಕತ್ವದ ಬಗ್ಗೆ ಮೈದಾನದಲ್ಲೇ ಅಸಮಾಧಾನ ತೋಡಿಕೊಂಡ ಕೊಹ್ಲಿ?

 

IPL 2025 | RCB vs DC: ಇದು ನನ್ನ ನೆಲ ಎಂದ ರಾಹುಲ್‌

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

 

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

 

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

 

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ದ್ರಾವಿಡ್ ಕುರಿತಂತೆ ಭಾವನಾತ್ಮಕ ಸಂದೇಶ ಹಂಚಿಕೊಂಡ ರೋಹಿತ್ ಶರ್ಮಾ

  • White Facebook Icon
bottom of page