top of page

ಬ್ಯಾಲಟ್ ಪೇಪರ್ ಬಳಕೆ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!

  • Writer: sumanth newwaves
    sumanth newwaves
  • Sep 19, 2025
  • 1 min read

ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ.



ಬೆಂಗಳೂರು: ಮುಂದಿನ ಚುನಾವಣೆಗಳಲ್ಲಿ (ಸ್ಥಳೀಯ ಸಂಸ್ಥೆಗಳು) ಇವಿಎಂ ಯಂತ್ರ ಬದಿಗಿಟ್ಟು ಮತ ಪತ್ರ (ಬ್ಯಾಲಟ್ ಪೇಪರ್) ಬಳಸುವ ರಾಜ್ಯ ಸರ್ಕಾರ ನಿರ್ಧಾರವನ್ನು ರಾಜ್ಯ ಬಿಜೆಪಿ ಟೀಕಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಾಮಾಣಿಕರಿಸಿಕೊಂಡಂತಿದೆ ಎಂದು ಟೀಕಿಸಿದ್ದಾರೆ.

ಬ್ಯಾಲಟ್ ಪೇಪರ್ ಮೇಲೆ ನಂಬಿಕೆ ಇಟ್ಟಿರುವ ರಾಜ್ಯ ಸರ್ಕಾರ, EVM ಮತಯಂತ್ರ ಬಳಸಿ ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ ನಡೆಸಿದ ಚುನಾವಣೆಗಳಲ್ಲಿ. ಅದೂ ಕಾಂಗ್ರೆಸ್ಸಿಗರ ಮೇಲೇ ಹೆಚ್ಚು ಎಂಬುದನ್ನು ಕಾಂಗ್ರೆಸ್ಸಿಗರು ಇತಿಹಾಸದ ಪುಟಗಳನ್ನು ತೆರೆದು ನೋಡಲಿ. ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣವಾಗಿದ್ದು ಅವರು ನಡೆಸಿದ ಮತಗಳ್ಳತನ ಹಾಗೂ ಅಕ್ರಮ ಚುನಾವಣೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿದ ತೀರ್ಪಿನಿಂದ ಎಂಬ ಇತಿಹಾಸವನ್ನು ದೇಶದ ಜನ ಮರೆತಿಲ್ಲ ಎಂದು ತಿರುಗೇಟು ನೀಡಿದ್ದಾರೆ.


Comments


ಹೆಚ್ಚು ಓದಿದ ಸುದ್ದಿ

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ಚುರುಮುರಿ: ಸಂಬಳದ ಜೋಕು!

ಕ್ರೀಡೆ

IPL 2025 ಕಳಪೆ ಸಾಧನೆ: ತವರಿನ ಅಂಗಳ ಚಿನ್ನಸ್ವಾಮಿಯಲ್ಲಿ ಆರ್‌ಸಿಬಿಗೆ 45ನೇ ಸೋಲು!

 

ಸಿನಿಮಾ ರಂಗಕ್ಕೆ ಕಾಲಿಟ್ಟ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ!

 

IPL 2025:ಪಾಟೀದಾರ್ ನಾಯಕತ್ವದ ಬಗ್ಗೆ ಮೈದಾನದಲ್ಲೇ ಅಸಮಾಧಾನ ತೋಡಿಕೊಂಡ ಕೊಹ್ಲಿ?

 

IPL 2025 | RCB vs DC: ಇದು ನನ್ನ ನೆಲ ಎಂದ ರಾಹುಲ್‌

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

 

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

 

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

 

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ: ಗುರುವಾರ, ಏಪ್ರಿಲ್ 10, 2025

 

ಬೆಂಗಳೂರು: ನಾಮಕರಣಕ್ಕೆ ಹೊರಟವರು ಸಾವಿನ ಮನೆಗೆ

 

IPL 2025 | ಡೆಲ್ಲಿಗೆ ಸತತ 4ನೇ ಜಯ; ತವರಿನಲ್ಲಿ ಮತ್ತೆ ಮುಗ್ಗರಿಸಿದ ಆರ್‌ಸಿಬಿ

 

ದ್ರಾವಿಡ್ ಕುರಿತಂತೆ ಭಾವನಾತ್ಮಕ ಸಂದೇಶ ಹಂಚಿಕೊಂಡ ರೋಹಿತ್ ಶರ್ಮಾ

  • White Facebook Icon
bottom of page